ಕನ್ನಡವೇ ಸತ್ಯ ಕನ್ನಡವೇ ನಿತ್ಯ

ರಚನೆ: ರಾಷ್ಟ್ರಕವಿ ಕುವೆಂಪು
ಸಂಗೀತ: ಸಿ ಅಶ್ವಥ್
ಗಾಯನ: ಡಾಕ್ಟರ್ ರಾಜಕುಮಾರ್


ಎಲ್ಲಾದರುಇರು ಎಂತಾದರುಇರು
ಎಂದೆಂದಿಗು ನೀ ಕನ್ನಡವಾಗಿರು
ಕನ್ನಡವೇ ಸತ್ಯ ಕನ್ನಡವೇ ನಿತ್ಯ

ಕನ್ನಡ ಗೋವಿನ ಓ ಮುದ್ದಿನ ಕರು
ಕನ್ನಡತನವೊಂದಿದ್ದರೆ ನೀ ಅಮ್ಮಗೆ ಕಲ್ಪತರು
ಕನ್ನಡವೇ ಸತ್ಯ ಕನ್ನಡವೇ ನಿತ್ಯ

ನೀ ಮೆಟ್ಟುವ ನೆಲ ಅದೇ ಕರ್ನಾಟಕ ನೀನೆರುವ ಮಲೆ ಸಹ್ಯಾದ್ರಿ (2)
ನೀ ಮುಟ್ಟುವ ಮರ ಶ್ರೀಗಂಧದ ಮರ, ನೀ ಕುಡಿಯುವ ನೀರ್ ಕಾವೇರಿ
ಪಂಪನೋದುವ ನಿನ್ನಾನಾಲಗೆ ಕನ್ನಡವೆ ಸತ್ಯ
ಕುಮಾರ ವ್ಯಾಸನ ಆಲಿಪ ಕಿವಿಯದು ಕನ್ನಡವೇ ನಿತ್ಯ

ಎಲ್ಲಾದರೂ ಇರು ಎಂತಾದರು ಇರು
ಎಂದೆಂದಿಗೂ ನೀ ಕನ್ನಡವಾಗಿರು

ಹರಿಹರರಾಘವರಿಗೆ ಎರಗುವ ಮನ
ಹಾಳಾಗಿಹ ಹಂಪೆಗೆ ಕೊರಗುವ ಮನ (2)

ಪೆಂಪಿನ ಬನವಾಸಿಗೆ ಕರಗುವ ಮನ
ಬೆಲ್ಗೊಳ ಬೇಲೂರಳನೆನೆಯುವ ಮನ
ಜೋಗದ ಜಲಪಾತದಿಧುಮುಕುವ ಮನ
ಮಲೆನಾಡಿಗೆ ಹೊಂಪುಲಿಹೋಗುವ ಮನ

ಕನ್ನಡವೇ ಸತ್ಯ
ಕನ್ನಡವೇ ನಿತ್ಯ
ಎಲ್ಲಾದರೂ ಇರು ಎಂತಾದರು ಇರು
ಎಂದೆಂದಿಗೂ ನೀ ಕನ್ನಡವಾಗಿರು

ಕಾಜಾಣಕೆ ಗಿಳಿ ಕೋಗಿಲೆ ಇಂಪಿಗೆ
ಮಲ್ಲಿಗೆ ಸಂಪಿಗೆ ಕೇದಗೆ ಕಂಪಿಗೆ
ಮಾವಿನ ಹೊಂಗೆಯ ತಳಿರಿನ ತಂಪಿಗೆ
ರಸರೋಮಾಂಚನಗೊಳುವಾ ತನುಮನ

ಎಲ್ಲಿದ್ದರೆ ಏನ್ ಎಂತಿದ್ದರೆ ಏನ್
ಎಂದೆಂದಿಗು ತಾನ್
ಕನ್ನಡವೇ ಸತ್ಯ
ಕನ್ನಡವೇ ನಿತ್ಯ
ಅನ್ಯವೆನಲದೆ ಮಿತ್ಯ

ಎಲ್ಲಾದರೂ ಇರು ಎಂತಾದರು ಇರು
ಎಂದೆಂದಿಗೂ ನೀ ಕನ್ನಡವಾಗಿರು
ಕನ್ನಡವೇ ಸತ್ಯ
ಕನ್ನಡವೇ ನಿತ್ಯ(2)

ಕನ್ನಡವೇ ಸತ್ಯ
ಕನ್ನಡವೇ ನಿತ್ಯ

Leave a comment